ಡಾ.ಪುರುಷೋತ್ತಮ ಬಿಳಿಮಲೆ ಅವರ ಈ ಕೃತಿ, ಸುಳ್ಯ ಮತ್ತು ಕೊಡಗಿನ ರೈತರು ಈಸ್ಟ್ ಇಂಡಿಯಾ ಕಂಪೆನಿಯು ಜಾರಿಗೆ ತಂದ ಹೊಸ ಕಂದಾಯ ವ್ಯವಸ್ಥೆಯ ವಿರುದ್ಧ ೧೮೩೪ರಿಂದ ೧೮೩೭ರವರೆಗೆ ನಡೆಸಿದ ದಿಟ್ಟ ಹೋರಾಟವನ್ನು ವಿವರಿಸುತ್ತದೆ. ಕಂಪೆನಿ ಸರಕಾರದ ಪ್ರಬಲ ಸೈನಿಕ ವ್ಯವಸ್ಥೆಯ ವಿರುದ್ಧ ಸಾಮಾನ್ಯ ಜನರು ಸಂಘಟಿತಗೊಂಡ ರೀತಿ, ವೈರಿಯನ್ನು ಮಣಿಸಲು ಅನುಸರಿಸಿದ ಗೆರಿಲ್ಲಾ ಮಾದರಿಯ ತಂತ್ರಗಳ ಕುರಿತು ಬೆಳಕು ಚೆಲ್ಲುತ್ತದೆ.